ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.
TSK
TSK · ದಾನಿಯೇಲನು 11:27
مراجع Treasury of Scripture Knowledge في ಕನ್ನಡ IRV.
ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
¶ ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
“ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.
¶ “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
ಆತನು ಅವರಿಗೆ, ‹“ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.›
¶ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.