ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.
TSK
TSK · ದಾನಿಯೇಲನು 3:19
مراجع Treasury of Scripture Knowledge في ಕನ್ನಡ IRV.
¶ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.
“ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.
ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.
¶ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
¶ ‹“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.›
¶ ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.