ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
TSK
TSK · ದಾನಿಯೇಲನು 3:26
مراجع Treasury of Scripture Knowledge في ಕನ್ನಡ IRV.
ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
¶ ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
¶ ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.