ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.
TSK
TSK · ದಾನಿಯೇಲನು 3:27
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
‹ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.›
ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.