ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
TSK
TSK · ದಾನಿಯೇಲನು 4:1
مراجع Treasury of Scripture Knowledge في ಕನ್ನಡ IRV.
ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.