¶ “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
TSK
TSK · ದಾನಿಯೇಲನು 4:13
مراجع Treasury of Scripture Knowledge في ಕನ್ನಡ IRV.
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.
¶ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.
‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.
ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.