ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
TSK
TSK · ದಾನಿಯೇಲನು 4:35
مراجع Treasury of Scripture Knowledge في ಕನ್ನಡ IRV.
ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.
“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,