TSK

TSK · ದಾನಿಯೇಲನು 4:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.

¶ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.

¶ ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.