ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
TSK
TSK · ದಾನಿಯೇಲನು 5:19
مراجع Treasury of Scripture Knowledge في ಕನ್ನಡ IRV.
ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
¶ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.