TSK

TSK · ದಾನಿಯೇಲನು 6:16

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.

ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.

‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.

ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.

ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.

ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.

ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;