TSK

TSK · ದಾನಿಯೇಲನು 6:24

مراجع Treasury of Scripture Knowledge في ಕನ್ನಡ IRV.

العودة إلى المقطع

ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,

ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.

ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.

ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.

ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.