TSK

TSK · ದಾನಿಯೇಲನು 7:14

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.

ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.

ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.

¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

‹ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ”› ಅಂದನು.

ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ‹ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು› ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.

‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”