¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
TSK
TSK · ದಾನಿಯೇಲನು 7:15
مراجع Treasury of Scripture Knowledge في ಕನ್ನಡ IRV.
ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
¶ ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.
¶ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!
ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.
ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
¶ ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.