ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
TSK
TSK · ದಾನಿಯೇಲನು 7:9
مراجع Treasury of Scripture Knowledge في ಕನ್ನಡ IRV.
ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
¶ ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
¶ ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.