TSK

TSK · ದಾನಿಯೇಲನು 9:12

مراجع Treasury of Scripture Knowledge في ಕನ್ನಡ IRV.

العودة إلى المقطع

ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.

“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.

ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.

ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.

‹ನಿಮಗೆ ಸತ್ಯವಾಗಿ ಹೇಳುತ್ತೇನೆ,›‹ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.›

‹ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.›

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,