¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
TSK
TSK · ದಾನಿಯೇಲನು 9:27
مراجع Treasury of Scripture Knowledge في ಕನ್ನಡ IRV.
ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›
¶ ‹“ಇದಲ್ಲದೆ›‹ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ). ‹ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.›
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.