ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
TSK
TSK · ದಾನಿಯೇಲನು 9:5
مراجع Treasury of Scripture Knowledge في ಕನ್ನಡ IRV.
ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.
¶ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.
ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.
ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.
ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.