“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
TSK
TSK · ಧರ್ಮೋಪದೇಶಕಾಂಡ 13:17
مراجع Treasury of Scripture Knowledge في ಕನ್ನಡ IRV.
ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
¶ ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.
¶ ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.
ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.
ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!