ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.
TSK
TSK · ಧರ್ಮೋಪದೇಶಕಾಂಡ 13:6
مراجع Treasury of Scripture Knowledge في ಕನ್ನಡ IRV.
ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.
ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
¶ ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.
ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.