ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · ಧರ್ಮೋಪದೇಶಕಾಂಡ 14:2
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.