TSK

TSK · ಧರ್ಮೋಪದೇಶಕಾಂಡ 14:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.

ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

¶ “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.

¶ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,

ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.