ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
TSK
TSK · ಧರ್ಮೋಪದೇಶಕಾಂಡ 16:3
مراجع Treasury of Scripture Knowledge في ಕನ್ನಡ IRV.
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.
ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.
ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.
¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.