TSK

TSK · ಧರ್ಮೋಪದೇಶಕಾಂಡ 2:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,

ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.

ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.

ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.

ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.