TSK

TSK · ಧರ್ಮೋಪದೇಶಕಾಂಡ 28:21

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.

ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.

ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.

“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.