TSK

TSK · ಧರ್ಮೋಪದೇಶಕಾಂಡ 28:22

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.

ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.

“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”