¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
TSK
TSK · ಧರ್ಮೋಪದೇಶಕಾಂಡ 29:4
مراجع Treasury of Scripture Knowledge في ಕನ್ನಡ IRV.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
‹ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.›
ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.