TSK

TSK · ಧರ್ಮೋಪದೇಶಕಾಂಡ 3:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.

ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.

ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:

ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ

ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.