ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
TSK
TSK · ಧರ್ಮೋಪದೇಶಕಾಂಡ 32:20
مراجع Treasury of Scripture Knowledge في ಕನ್ನಡ IRV.
ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.
ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.
ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
‹ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,›
ಅದಕ್ಕಾತನು, ‹“ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ”› ಅಂದನು.
‹ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?”› ಅಂದನು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.