¶ ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
TSK
TSK · ಧರ್ಮೋಪದೇಶಕಾಂಡ 32:3
مراجع Treasury of Scripture Knowledge في ಕನ್ನಡ IRV.
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
¶ ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.
ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
¶ ‹“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.›
ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.