ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
TSK
TSK · ಧರ್ಮೋಪದೇಶಕಾಂಡ 32:30
مراجع Treasury of Scripture Knowledge في ಕನ್ನಡ IRV.
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
¶ ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
¶ ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?
ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”