ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
TSK
TSK · ಧರ್ಮೋಪದೇಶಕಾಂಡ 32:36
مراجع Treasury of Scripture Knowledge في ಕನ್ನಡ IRV.
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,
ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.