TSK

TSK · ಧರ್ಮೋಪದೇಶಕಾಂಡ 32:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.

ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.

ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.

ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?”› ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ ‹“ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ”› ಅಂದನು.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.