ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.
TSK
TSK · ಧರ್ಮೋಪದೇಶಕಾಂಡ 32:9
مراجع Treasury of Scripture Knowledge في ಕನ್ನಡ IRV.
ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.
ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.
ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,