ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
TSK
TSK · ಧರ್ಮೋಪದೇಶಕಾಂಡ 33:28
مراجع Treasury of Scripture Knowledge في ಕನ್ನಡ IRV.
ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›