¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
TSK
TSK · ಧರ್ಮೋಪದೇಶಕಾಂಡ 4:23
مراجع Treasury of Scripture Knowledge في ಕನ್ನಡ IRV.
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.
ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.