¶ “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
TSK
TSK · ಧರ್ಮೋಪದೇಶಕಾಂಡ 4:25
مراجع Treasury of Scripture Knowledge في ಕನ್ನಡ IRV.
ನೀವು ಸ್ತ್ರೀಪುರುಷರ ರೂಪವನ್ನಾಗಲಿ,
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.
ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?