TSK

TSK · ಧರ್ಮೋಪದೇಶಕಾಂಡ 4:9

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.

¶ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

¶ “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”

ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ

ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.

ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.

ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.

ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.

ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

¶ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›