¶ ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
TSK
TSK · ಧರ್ಮೋಪದೇಶಕಾಂಡ 5:21
مراجع Treasury of Scripture Knowledge في ಕನ್ನಡ IRV.
ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,
ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.