ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ಧರ್ಮೋಪದೇಶಕಾಂಡ 6:7
مراجع Treasury of Scripture Knowledge في ಕನ್ನಡ IRV.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?
ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
‹ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
¶ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.