TSK

TSK · ಧರ್ಮೋಪದೇಶಕಾಂಡ 8:2

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.

¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

¶ ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.

ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.

ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು

ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;

ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.

ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.

ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.

ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.

ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

¶ ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.