ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
TSK
TSK · ಧರ್ಮೋಪದೇಶಕಾಂಡ 8:7
مراجع Treasury of Scripture Knowledge في ಕನ್ನಡ IRV.
ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.
ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.