¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
TSK
TSK · ಧರ್ಮೋಪದೇಶಕಾಂಡ 9:1
مراجع Treasury of Scripture Knowledge في ಕನ್ನಡ IRV.
ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
¶ ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ
“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
¶ ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.