TSK

TSK · ಧರ್ಮೋಪದೇಶಕಾಂಡ 9:28

مراجع Treasury of Scripture Knowledge في ಕನ್ನಡ IRV.

العودة إلى المقطع

ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.

ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.

ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.