ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.
TSK
TSK · ಧರ್ಮೋಪದೇಶಕಾಂಡ 9:3
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಕೇಳಿ ತಿಳಿದುಕೊಳ್ಳಿರಿ,›
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.