TSK

TSK · ಪ್ರಸಂಗಿ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.

ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.

ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.

ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.

ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,

ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.