TSK

TSK · ಪ್ರಸಂಗಿ 12:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.

ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.

¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.

ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.

¶ ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

¶ ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.