ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
TSK
TSK · ಪ್ರಸಂಗಿ 2:17
مراجع Treasury of Scripture Knowledge في ಕನ್ನಡ IRV.
ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
¶ ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.
ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.