ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
TSK
TSK · ಪ್ರಸಂಗಿ 2:24
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
¶ ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.
ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
¶ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
¶ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›
ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.