ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
TSK
TSK · ಪ್ರಸಂಗಿ 3:14
مراجع Treasury of Scripture Knowledge في ಕನ್ನಡ IRV.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
¶ ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”