TSK

TSK · ಪ್ರಸಂಗಿ 3:18

مراجع Treasury of Scripture Knowledge في ಕನ್ನಡ IRV.

العودة إلى المقطع

“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?

ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.

ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.